ಶುಶ್ರೂಷಕಿ ಅಧಿಕಾರಿಯ ಕರಿಮಣಿ ಕಳವು

Update: 2022-10-11 14:06 GMT

ಕಾರ್ಕಳ, 11: ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿ ಅಧಿಕಾರಿಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನದ ಕರಿಮಣಿ ಸರ ಕಳವಾಗಿರುವ ಘಟನೆ ಅ.10 ರಂದು ನಡೆದಿದೆ.

ರೇಚಲ್ ಡಿಸೋಜ (43) ಎಂಬವರು ಬೆಳಗ್ಗೆ ಕರ್ತವ್ಯಕ್ಕೆ ಬಂದು ತನ್ನ 6 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಬ್ಯಾಗಿನಲ್ಲಿ ಇಟ್ಟು ಬ್ಯಾಗನ್ನು ಕೊಠಡಿಯಲ್ಲಿ ಇಟ್ಟಿದ್ದರು. ಮಧ್ಯಾಹ್ನ 1:30ರ ಸುಮಾರಿಗೆ ಬಂದು ನೋಡಿದಾಗ ಕರಿಮಣಿ ಸರ ಕಳವಾಗಿರುವುದು ತಿಳಿದುಬಂದಿದೆ.  ಕಳವಾದ ಸರ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News