ಮೈಸೂರು: ಚಾಕುವಿನಿಂದ ಇರಿದು ಯುವಕನ ಕೊಲೆ

Update: 2022-10-13 12:09 GMT

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಬುಧವಾರ ರಾತ್ರಿ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮೈಸೂರು ನಗರದ ಸುನೀಲ್ (25) ಕೊಲೆಯಾದ ಯುವಕ.

ನಗರದ ದೇವರಾಜ ಮಾರುಕಟ್ಟೆಯ ಬಾಳೆ ಮಂಡಿ ಬಳಿ  ಬುಧವಾರ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಸುನೀಲ್ ನನ್ನು ಚಾಕು ಮತ್ತು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ 

ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News