ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆ ಹೆಜ್ಜೆ ಹಾಕಿದ ರಾಮ, ಲಕ್ಷ್ಮಣ, ಹನುಮಂತ!

Update: 2022-10-14 06:56 GMT

ಚಿತ್ರದುರ್ಗ, ಅ.14: ಮೊಳಕಾಲ್ಮುರಿನ ರಾಮಪುರದಿಂದ ಶುಕ್ರವಾರ ಬೆಳಗ್ಗೆ ಹೊರಟ ಭಾರತ್ ಜೋಡೋ(Bharath Jodo Yatra) ಪಾದಯಾತ್ರೆಯಲ್ಲಿ ರಾಮ, ಲಕ್ಷ್ಮಣ, ಹನುಮಂತ ಸೇರಿದಂತೆ ರಾಮಾಯಣ ಪಾತ್ರಧಾರಿಗಳ ಜತೆ ರಾಹುಲ್ ಗಾಂಧಿ ಅವರು ಹೆಜ್ಜೆ ಹಾಕಿದರು.

ರಾಹುಲ್ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಇಂದು 13ನೇ ದಿನಕ್ಕೆ ಕಾಲಿಟ್ಟಿದೆ.

  'ಭಾರತ್‌ ಜೋಡೊ ಯಾತ್ರೆ'ಯು ಇಂದು ಸಂಜೆ ಆಂಧ್ರ ಪ್ರದೇಶವನ್ನು ಪ್ರವೇಶಿಸಲಿದೆ. ಸಂಜೆ ಆಂಧ್ರದ ಅನಂತಪುರ ಜಿಲ್ಲೆಯ ಒಬಲಾಪುರಂನಲ್ಲಿ ರಾಹುಲ್‌ ಗಾಂಧಿ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ.

.'ಭಾರತ್‌ ಜೋಡೊ ಯಾತ್ರೆ ಹೋದಲೆಲ್ಲ ಪ್ರೀತಿಯ ಮಹಾಪೂರವೇ ಹರಿದು ಬರುತ್ತಿದೆ. ತಮಿಳುನಾಡು, ಕೇರಳ, ಕರ್ನಾಟಕದಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮತ್ತೊಂದು ಮೈಲುಗಲ್ಲಾಗುವ ದಿನ ನಮ್ಮ ಮುಂದಿದೆ. ಆಂಧ್ರ ಪ್ರದೇಶದಲ್ಲಿನ ನಮ್ಮ ಚುಟುಕು ಯಾತ್ರೆಯಲ್ಲಿ ಪಾಲ್ಗೊಳ್ಳಿ' ಎಂದು ಭಾರತ್‌ ಜೋಡೊ ಯಾತ್ರೆ ತಂಡ ಟ್ವೀಟ್‌ ಮಾಡಿದೆ.

ಇದನ್ನೂ ಓದಿ: ಖುತುಮತಿಯಾಗುವವರೆಗೆ ಮುರುಘಾಶ್ರೀಯಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತ ಇಬ್ಬರು ಹೆಣ್ಣುಮಕ್ಕಳ ತಾಯಿ ದೂರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News