AICC ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ನಾಳೆಯೇ ಬೆಂಗಳೂರಿಗೆ ಬರುವಂತೆ ಶಾಸಕರಿಗೆ ಸೂಚಿಸಿದ ಸಿದ್ದರಾಮಯ್ಯ
Update: 2022-10-14 18:02 GMT
ಬೆಂಗಳೂರು, ಅ. 14: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಅ.17ಕ್ಕೆ ಚುನಾವಣೆ ನಡೆಯಲಿದ್ದು, ಅ.16ರ ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿನ ಬೆಳಗ್ಗೆ 10ರಿಂದ ಸಂಜೆ 4ಗಂಟೆಯ ವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶುಕ್ರವಾರ ಈ ಸಂಬಂಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಹಾಗೂ ಶಾಸಕ ಇ.ತುಕರಾಮ್ ಅವರು, ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭೆ ಸದಸ್ಯರು ಹಾಗೂ ರಾಜ್ಯಸಭೆ ಸದಸ್ಯರು ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.