×
Ad

ನೀಲಾವರ- ಬಾವಲಿಕುದ್ರು ರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ

Update: 2022-10-15 20:41 IST

ಉಡುಪಿ, ಅ.15: ಉಡುಪಿ ವಿಧಾನಸಭಾ ಕ್ಷೇತ್ರದ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹು ಬೇಡಿಕೆಯ ನೀಲಾವರ- ಬಾವಲಿಕುದ್ರು ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಕೆ.ರಘುಪತಿ ಭಟ್ ಶನಿವಾರ ಚಾಲನೆ ನೀಡಿದರು.

ಶಾಸಕರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಯಡಿ 50 ಲಕ್ಷ ರೂ. ಈ ಕಾಮಗಾರಿಗೆ ಮಂಜೂರಾಗಿದೆ. ಈ ರಸ್ತೆ ಕಾಮಗಾರಿಗೆ ಇಂದು ಕೆ.ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ನೀಲಾವರ ಗ್ರಾಪಂ ಅಧ್ಯಕ್ಷ ಮಹೇಂದ್ರ ಕುಮಾರ್, ಉಪಾಧ್ಯಕ್ಷೆ ಬೇಬಿ, ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ನೀಲಾವರ ಗ್ರಾಪಂನ ಸರ್ವ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News