×
Ad

ಚೆಸ್ ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಸಹಕಾರಿ: ಡಿವೈಎಸ್ಪಿ ಶ್ರೀಕಾಂತ್

Update: 2022-10-15 21:15 IST

ಕುಂದಾಪುರ, ಅ.15: ಕುಂದಾಪುರದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮರಣಾರ್ಥ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟವನ್ನು ಕುಂದಾಪುರ ಪೊಲೀಸ್ ಡಿವೈಎಸ್ಪಿ ಶ್ರೀಕಾಂತ್ ಅವರು ಇಂದು ಬೆಳಗ್ಗೆ ಕುಂದಾಪುರದ ನಾರಾಯಣ ಗುರು ಎ.ಸಿ.ಹಾಲ್‌ನಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಿರಿಯರು, ಕಿರಿಯರೆಂಬ ವಯಸ್ಸಿನ ಭೇದವಿಲ್ಲದೆ ಎಲ್ಲರೂ ಆಡಬಹುದಾದ ಚೆಸ್ ಆಟದಿಂದ ಮೆದುಳು ಚುರುಕುಗೊಳ್ಳುತ್ತದೆ. ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಇದು ಸಹಕಾರಿ ಎಂದರು.

ಮುಖ್ಯ ಅತಿಥಿಯಾಗಿ ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್  ಮೆಂಡನ್, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್. ಪೂಜಾರಿ, ಉದ್ಯಮಿ ರಂಜನ್ ನಾಗರಕಟ್ಟೆ, ಉಡುಪಿ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಅಮಿತ್ ಕುಮಾರ್ ಶೆಟ್ಟಿ, ಮುಖ್ಯ ತೀರ್ಪುಗಾರ ವಸಂತ್ ಬಿ.ಹೆಚ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚೆಸ್‌ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಅವನಿ ಆಚಾರ್ಯ ಉಡುಪಿ, ಪ್ರಗತಿ ನಾಯಕ್ ಬ್ರಹ್ಮಾವರ ಇವರನ್ನು ಸನ್ಮಾನಿಸಲಾ ಯಿತು.

ಫಿಡೆ ರೇಟೆಡ್ ಈ ಚೆಸ್ ಪಂದ್ಯಾಟದಲ್ಲಿ ಭಾರತದ ಒಟ್ಟು 355 ಸ್ಪರ್ಧಿಗಳು ಭಾಗವಹಿಸಿದ್ದಾರೆ. ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ, ಶಿವನಾರಾಯಣ ಐತಾಳ್ ಕೋಟ ಮತ್ತು ಸೌಂದರ್ಯ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News