ಮಡಿಕೇರಿ | ಪೆಟ್ರೋಲ್ ಬಾಂಬ್ ಸ್ಫೋಟಿಸುವ ಬೆದರಿಕೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

Update: 2022-10-16 15:13 GMT
ಸಾಂದರ್ಭಿಕ ಚಿತ್ರ

ಮಡಿಕೇರಿ ಅ.16 : ಮಡಿಕೇರಿ ಸೇರಿದಂತೆ ವಿವಿಧೆಡೆ ಪೆಟ್ರೋಲ್ ಬಾಂಬ್ ಸ್ಫೋಟಿಸುವ ಕುರಿತು  ಮೊಬೈಲ್ ಸಂಭಾಷಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಶೇಷಪ್ಪ ರೈ ಎಂಬುವವರು ನೀಡಿದ ದೂರಿನ ಹಿನ್ನೆಲೆ ನಗರಸಭಾ ಸದಸ್ಯ ಜೆಡಿಎಸ್ ನ ಮುಸ್ತಫ ಹಾಗೂ ಬೆಟ್ಟಗೇರಿಯ ಉದ್ಯಮಿ ಅಬ್ದುಲ್ಲ ಎಂಬುವವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಇಂದು ಬಂಧನಕ್ಕೊಳಗಾಗಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು,  ಇಬ್ಬರು ಆರೋಪಿಗಳಿಗೆ ಜಾಮೀನು ದೊರೆತಿದೆ.

'ಆಡಿಯೋ ವೈರಲ್ ಆದ ಕುರಿತು ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News