×
Ad

ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆ: ಇಬ್ಬರು ಆರೋಪಿಗಳ ಬಂಧನ

Update: 2022-10-18 20:51 IST

ಮಡಿಕೇರಿ ಅ.18 : ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ (47) ಹಾಗೂ ಪುರುಷೋತ್ತಮ ಕೆ.ಎಸ್.(48) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಂಧಿತರಿಂದ ಸುಮಾರು 100 ಕೆ.ಜಿ ಕಡವೆ ಮಾಂಸ, ಕತ್ತಿ, ಟಾರ್ಪಲ್ ಮತ್ತಿತ್ತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆನ್ನಲಾಗಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ. 

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ. ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕರಾದ ಕಾರ್ತಿಕ್, ವೀಕ್ಷಕರಾದ ಕೂಸಪ್ಪ, ಮನೋಜ್ ಕುಮಾರ್ ಕಾರ್ಯಾಚರಣೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News