×
Ad

ಫ್ಯಾಸಿಸ್ಟ್‌ ಶಕ್ತಿಗಳೊಂದಿಗೆ ಹೋರಾಡಬೇಕಿದೆ: ಗೆಲುವಿನ ಬಳಿಕ ಮಲ್ಲಿಕಾರ್ಜುನ ಖರ್ಗೆ ಮೊದಲ ಪತ್ರಿಕಾಗೋಷ್ಠಿ

Update: 2022-10-19 20:11 IST

ಹೊಸದಿಲ್ಲಿ: ಎರಡು ದಶಕಗಳ ಬಳಿಕ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಮುಖ್ಯಸ್ಥರಾಗಿ ಆಯ್ಕೆಗೊಂಡಿರುವ ಮಲ್ಲಿಕಾರ್ಜುನ ಖರ್ಗೆ, "ಪ್ರಜಾಪ್ರಭುತ್ವದ ಸೋಗು ಹಾಕುತ್ತಾ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕು" ಎಂದು ಹೇಳಿದರು.

"ನಾವು ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ. ಪ್ರಜಾಸತ್ತಾತ್ಮಕವಾಗಿ ನಟಿಸುವ ಆದರೆ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಶಕ್ತಿಗಳ ವಿರುದ್ಧ ನಾವು ಹೋರಾಡಬೇಕಾಗಿದೆ" ಎಂದು ಶಶಿ ತರೂರ್ ವಿರುದ್ಧದ ಭಾರಿ ಗೆಲುವಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ ಹೇಳಿದರು.

2014 ರಿಂದ ಸತತ ಚುನಾವಣೆಯ ಸೋಲಿನ ನಂತರ ದೇಶದಲ್ಲಿ ತನ್ನ ಚುನಾವಣಾ ಪ್ರಾಮುಖ್ಯತೆಯನ್ನು ಮರಳಿ ಪಡೆಯಲು ಹೋರಾಡುತ್ತಿರುವ ಕಾಂಗ್ರೆಸ್, "ಸ್ವಾತಂತ್ರ್ಯದ ನಂತರ ಈ ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಿದೆ" ಎಂದು ಅವರು ಹೇಳಿದರು.

"ಇಂದು, ಪ್ರತಿಯೊಂದು ಸಂಸ್ಥೆಯನ್ನು ಕಿತ್ತುಹಾಕಲಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಕಾಂಗ್ರೆಸ್ ತನ್ನ ರಾಷ್ಟ್ರವ್ಯಾಪಿ ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ" ಎಂದು ಖರ್ಗೆ ಹೇಳಿದರು.

ಇದೇ ವೇಳೆ ಅವರು ಪಕ್ಷದ ಕಾರ್ಯಕರ್ತರು ಮತ್ತು ಅವರ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಿದರು. “ನಾನು ಶಶಿ ತರೂರ್ ಅವರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಅವರು ನನ್ನ ಎದುರಾಳಿಯಾಗಿ ನಾವು ಪರಸ್ಪರ ಚೆನ್ನಾಗಿ ಹೋರಾಡಿದೆವು. ಈಗ ನಾವು ವಿಭಜಕ ಶಕ್ತಿಗಳ ವಿರುದ್ಧ ಜೊತೆಯಾಗಿ ಹೋರಾಡುತ್ತೇವೆ, ”ಎಂದು ಅವರು ನುಡಿದರು.

ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. “ರಾಹುಲ್ ಗಾಂಧಿಯವರು ದೇಶವನ್ನು ಒಗ್ಗೂಡಿಸಲು ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದ್ದಾರೆ ಮತ್ತು ಅವರ ಮೆರವಣಿಗೆಯಲ್ಲಿ ಇಡೀ ದೇಶವು ಅವರೊಂದಿಗೆ ಸೇರುತ್ತಿದೆ. ಅವರು ನನ್ನನ್ನು ಅಭಿನಂದಿಸಿದರು ಮತ್ತು ನಾನು ಕಾಂಗ್ರೆಸ್ ಪಕ್ಷದ ಕಾಲಾಳುವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಇಂದು ನಾವು ಪಕ್ಷದ ಕಾರ್ಯಕರ್ತರಾಗಿ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಇಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರಲ್ಲ" ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News