ತುಮಕೂರು | ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರು ಮೃತ್ಯು

Update: 2022-10-20 08:09 GMT

ತುಮಕೂರು, ಅ.20:  ಗೂಡ್ಸ್ ವಾಹನ ಹಾಗೂ ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206 ಕೊನೆಹಳ್ಳಿಯಲ್ಲಿ ವರದಿಯಾಗಿದೆ. 

ಮೃತರನ್ನು ಸಿದ್ದಾಪುರದ ನಿವಾಸಿ ಶಮಂತಾಚಾರ್ (55), ಶಿವಪುರದ ನಿವಾಸಿ ಶಿವಣ್ಣ ( 50) ಎಂದು ಗುರುತಿಸಲಾಗಿದೆ. 

ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 

ಸಾರ್ವಜನಿಕರ ಆಕ್ರೋಶ: 'ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು ರಸ್ತೆ ಅಭಿವೃದ್ಧಿಯ ಕೆಲಸವು ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಹಾಗೂ ರಸ್ತೆಗಳಲ್ಲಿ ಸೂಚನಾ ಫಲಕಗಳಿಲ್ಲದೆ ಇರುವುದು ಅಪಘಾತಗಳಿಗೆ ಹೆಚ್ಚಿನ ಕಾರಣವಾಗಿದೆ. ಕಳೆದ ಎರಡು ತಿಂಗಳಲ್ಲಿ  ತಿಪಟೂರು ನಿಂದ ಅರಸೀಕೆರೆ ಮಧ್ಯೆ ಸುಮಾರು 10ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News