ನಟ ಚೇತನ್‍ಗೆ ಮಸಿ ಬಳಿಯಲು ತೆರಳುತ್ತಿದ್ದ ಸಂಘಪರಿವಾರದ 12 ಮಂದಿ ಕಾರ್ಯಕರ್ತರು ವಶಕ್ಕೆ

Update: 2022-10-22 05:43 GMT
ನಟ ಚೇತನ್‍

ಬೆಂಗಳೂರು, ಅ.21: ‘ಭೂತಕೋಲ ಹಿಂದೂ ಸಂಪ್ರದಾಯವಲ್ಲ’ ಎಂಬ ಹೇಳಿಕೆ ಹಿನ್ನೆಲೆ ನಟ ಚೇತನ್‍ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವಂತಹ ಘಟನೆ ನಡೆದಿದೆ. 

ಶುಕ್ರವಾರ(ಅ. 21) ಶೇಷಾದ್ರಿಪುರಂನಲ್ಲಿರುವ ನಟ ಚೇತನ್ ಮನೆ ಬಳಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಈ ವೇಳೆ ಮುಖಕ್ಕೆ ಮಸಿ ಬಳಿಯಲು ಮುಂದಾದಾಗ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.  

ಇನ್ನು ಮಡಿಕೇರಿಯಲ್ಲಿ ನಟ ಚೇತನ್ ವಿರುದ್ಧ ಹಿಂದೂ ಯುವಸೇನೆ ಡಿವೈಎಸ್‍ಪಿಗೆ ದೂರು ನೀಡಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಬಗ್ಗೆ ನಟ ಚೇತನ್ ಟೀಕೆ ಮಾಡಿದ್ದು, ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂಬ ಹೇಳಿಕೆ ನೀಡಿದ್ದರು. ಚೇತನ್ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದು, ನಟ ಚೇತನ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಹಿಂದೂ ಯುವಸೇನೆ ಆಗ್ರಹಿಸಿದೆ.

ಇದನ್ನೂ ಓದಿ: ಭೂತಕೋಲ ಮೂಲ ನಿವಾಸಿಗಳದ್ದು ಎಂಬ ನಟ ಚೇತನ್‌ ಹೇಳಿಕೆ ಸಮರ್ಥಿಸಿದ ಸಂತೋಷ್‌ ಗುರೂಜಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News