ಪುನೀತ್ ರಾಜಕುಮಾರ್ ಅಭಿನಯದ 'ಗಂಧದ ಗುಡಿ' ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಬೊಮ್ಮಾಯಿ ಘೋಷಣೆ

Update: 2022-10-21 16:56 GMT
'ಗಂಧದ ಗುಡಿ' ಪೋಸ್ಟರ್ 

ಬೆಂಗಳೂರು, ಅ. 21 : ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯಿತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಅವರು ಇಂದು  ಪುನೀತ್ ಪರ್ವ, ಗಂಧದ ಗುಡಿ ಪ್ರಿ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

'ಗಂಧದ ಗುಡಿ ಚಲನಚಿತ್ರ ನಿಸರ್ಗ  ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ  ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ' ಎಂದರು.

'ಅಪ್ಪು ಜನಮಾನಸದಲ್ಲಿ ಜೀವಂತವಾಗಿದ್ದಾರೆ'' : '

ಅಪ್ಪುವನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾರೆ ಎಂಬ ಭಾವನೆ ನಮ್ಮಲ್ಲಿದೆ. ನಾನು ಕರ್ನಾಟಕದ ಉದ್ದಗಲಕ್ಕೂ  ಕೊಳ್ಳೇಗಾಲದಿಂದ ಹಿಡಿದು ಬೀದರ್ ವರೆಗೂ ಪ್ರತಿಯೊಂದು ಗ್ರಾಮದಲ್ಲಿ ಅಪ್ಪುವಿನ ಛಾಯಾಚಿತ್ರ,, ನಮನ, ಯುವಕರಲ್ಲಿ ಅಪ್ಪುವಿನ ಬಗ್ಗೆ ಪ್ರೀತಿ ವಿಶ್ವಾಸ ನೋಡಿದಾಗ, ಕೆಲವೊಮ್ಮೆ ವಿಸ್ಮಿತನಾಗುತ್ತೇನೆ.  ಅಂತಹ ವ್ಯಕ್ತಿತ್ವಕ್ಕೆ ದೇವರ ಆಶೀರ್ವಾದವಿದೆ'' ಎಂದರು.

''ಅಪ್ಪುರ ಅವರು ಇನ್ನೂ ಬಹಳ ವರ್ಷ ಬಾಳಬೇಕಾಗಿದ್ದವರು. ಅತ್ಯಂತ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅಪ್ಪು ಬಗ್ಗೆ ಎರಡು ವಿಶೇಷತೆ ಇದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಾಲಕಲಾವಿದರಾಗಿ ಖ್ಯಾತಿಯಾಗಿದ್ದಾರೆ. ಆದರೂ ಅವರ ಕೆಲಸಗಳು, ಆದರ್ಶಗಳು ಮತ್ತು ಅವರ ನಟನೆ ಮಾಡಿದ ಚಿತ್ರಗಳ ಮೂಲಕ ಅಪ್ಪು ಜನಮಾನಸದಲ್ಲಿ ಇಂದಿಗೂ ಜೀವಂತವಾಗಿದ್ದಾರೆ' ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News