10 ತಿಂಗಳ ಅವಧಿಯಲ್ಲಿ ಸಿಎಂ ಬೊಮ್ಮಾಯಿ, ಕೃಷಿ ಸಚಿವರ ಜಿಲ್ಲೆಯಲ್ಲೇ 112 ರೈತರ ಆತ್ಮಹತ್ಯೆ: ದಿನೇಶ್ ಗುಂಡೂರಾವ್ ಕಿಡಿ

Update: 2022-10-22 09:19 GMT

2
ಕೇವಲ 10 ತಿಂಗಳ ಅವಧಿಯಲ್ಲಿ ಹಾವೇರಿಯ 112 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಗಂಭೀರವಾದ ಸಂಗತಿ.

ಹಾವೇರಿ @BSBommai ಯವರ ತವರು ಜಿಲ್ಲೆ.

ಅಷ್ಟೆ ಏಕೆ, ಕೃಷಿ ಸಚಿವ @bcpatilkourava ಕೂಡ ಹಾವೇರಿಯವರೆ.

CM ಮತ್ತು ಕೃಷಿ ಸಚಿವರು ತಾವು ಪ್ರತಿನಿಧಿಸುವ ಜಿಲ್ಲೆಯ ರೈತರನ್ನೇ ಉದ್ಧಾರ ಮಾಡದವರು, ರಾಜ್ಯದ ರೈತರ ಉದ್ಧಾರ ಮಾಡುತ್ತಾರೆಯೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 22, 2022

ಬೆಂಗಳೂರು: 'ಕೇವಲ 10 ತಿಂಗಳ ಅವಧಿಯಲ್ಲಿ ಹಾವೇರಿಯ 112 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಗಂಭೀರವಾದ ಸಂಗತಿ.' ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆತಂಕ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, '' ಹಾವೇರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆ. ಅಷ್ಟೆ ಏಕೆ, ಕೃಷಿ ಸಚಿವ ಬಿ. ಸಿ. ಪಾಟೀಲ್ ಕೂಡ ಹಾವೇರಿಯವರೇ ಆಗಿದ್ದು, CM ಮತ್ತು ಕೃಷಿ ಸಚಿವರು ತಾವು ಪ್ರತಿನಿಧಿಸುವ ಜಿಲ್ಲೆಯ ರೈತರನ್ನೇ ಉದ್ಧಾರ ಮಾಡದವರು, ರಾಜ್ಯದ ರೈತರ ಉದ್ಧಾರ ಮಾಡುತ್ತಾರೆಯೇ?'' ಎಂದು ಪ್ರಶ್ನೆ ಮಾಡಿದ್ದಾರೆ. 

''ಹಾವೇರಿಯಲ್ಲಿ ಕಳೆದ 10 ತಿಂಗಳಲ್ಲಿ ಬೆಳೆಹಾನಿ ಹಾಗೂ ಸಾಲಬಾಧೆಗೆ 112 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸರ್ಕಾರದಿಂದ ರೈತರ ಉದ್ಧಾರ ಎಷ್ಟಾಗಿದೆ ಎಂಬುದಕ್ಕೆ ಈ ಆತ್ಮಹತ್ಯೆಗಳೇ ಸಾಕ್ಷಿ. ಇದು ಕೇವಲ ಒಂದು ಜಿಲ್ಲೆಯ ದುರಂತ ಕಥೆ. ಇನ್ನುಳಿದ ಜಿಲ್ಲೆಗಳ ಅಂಕಿ ಅಂಶ ತೆಗೆದರೆ ಬೊಮ್ಮಾಯಿ ಸರ್ಕಾರವೇ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ'' ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News