ಕೊಯಮತ್ತೂರು: ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ, ಓರ್ವ ವ್ಯಕ್ತಿ ಸಜೀವ ದಹನ

Update: 2022-10-23 11:29 GMT

ಕೊಯಮತ್ತೂರು: ನಗರದ ಉಕ್ಕಡಂ ಪ್ರದೇಶದಲ್ಲಿ ರವಿವಾರ ಮುಂಜಾನೆ ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನೊಳಗೆ ಕುಳಿತಿದ್ದ ವ್ಯಕ್ತಿ ಸುಟ್ಟು ಕರಕಲಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೊಟ್ಟೈ ಈಶ್ವರನ್ ದೇವಾಲಯದ ಸುತ್ತಮುತ್ತಲಿನ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನಾ ಸ್ಥಳಕ್ಕೆ ಎಡಿಜಿಪಿ ಪಿ. ತಾಮರೈ ಕಣ್ಣನ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕ್ಷ್ಯ ಸಂಗ್ರಹಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಪ್ರಕರಣದ ತನಿಖೆಗೆ ಆರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News