ಅಕ್ರಮ ಹಣ ವರ್ಗಾವಣೆ ಪ್ರಕರಣ; KSFIC ಅಧಿಕಾರಿ ಬಿ.ಸಿ.ಶಾಂತಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Update: 2022-10-24 12:23 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.24: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ (Karnataka State Forest Industrial Corporation Limited) ಸಹಾಯಕ ವ್ಯವಸ್ಥಾಪಕ ಬಿ.ಸಿ.ಶಾಂತಕುಮಾರ್ ಗೆ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯ ಆದೇಶಿಸಿದೆ.

2009ರಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮಗಳಿಕೆ ಆರೋಪದ ಮೇಲೆ ಆರೋಪಿ ಶಾಂತಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಈ ವೇಳೆ ಆರೋಪಿ ಬಳಿ 84.42 ಲಕ್ಷ ನಗದು ಪತ್ತೆಯಾಗಿತ್ತು. 

ಇದು ಆದಾಯ ಮೂಲಗಳಿಂದ ಶೇ.122ರಷ್ಟು ಹೆಚ್ಚಳವಾಗಿತ್ತು. ಈ ಅಂಶವನ್ನು ಆಧಾರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News