ಬೆಂಗಳೂರು: ವಾಯು ವಿಹಾರಕ್ಕೆ ತೆರಳಿದ್ದ ಯುವಕ ಮೃತ್ಯು

Update: 2022-10-25 06:30 GMT
ಸಾಂದರ್ಭಿಕ ಚಿತ್ರ

ಬೆಂಗಳೂರು (Bengaluru), ಅ.24: ವಾಯು ವಿಹಾರಕ್ಕೆ ತೆರಳಿದ್ದ ಯುವಕನೋರ್ವ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಬಿಇಎಲ್​ ಮೈದಾನದಲ್ಲಿ ನಡೆದಿದ್ದು, ಸದ್ಯಕ್ಕೆ ಮೃತಪಟ್ಟಿರುವ ಯುವಕನ ಹೆಸರು ತಿಳಿದುಬಂದಿಲ್ಲ.

ಮಂಗಳವಾರ ಬೆಳಗ್ಗೆ ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾಗ,  ಸಾರ್ವಜನಿಕರು ಕೂಡಲೇ ಸಮೀಪದ ಆಸ್ಪತ್ರೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.

ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ‌. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ : ಬೈಕಿನಲ್ಲಿ ಬಂದ ತಂಡದಿಂದ ಯುವಕನಿಗೆ ಹಲ್ಲೆ; ದೂರು ದಾಖಲು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News