ಗುರುಪುರ: ಸೇತುವೆಯ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಯುವಕ

Update: 2022-10-28 11:23 GMT

ಬಜ್ಪೆ, ಅ.28: ಸೇತುವೆಯ ಮೇಲೆ ಬೈಕ್ ನಿಲ್ಲಿಸಿದ ಯುವಕನೋರ್ವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆ ಗುರುಪುರ ಸೇತುವೆಯ ಬಳಿ ನಡೆದಿದೆ.

ನಾಪತ್ತೆಯಾದ ಯುವಕನನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ (38) ಎಂದು ಗುರುತಿಸಲಾಗಿದೆ.

ಪೈಂಟರ್ ವೃತ್ತಿ ಮಾಡುತ್ತಿದ್ದ ಅರುಣ್ ಕುಮಾರ್ ಗುರುವಾರ ರಾತ್ರಿ ಗುರುಪುರ ಸೇತುವೆಯ ಮೇಲೆ ತನ್ನ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

ಅವರು ನದಿಗೆ ಹಾರುವುದನ್ನು ಸಾರ್ವಜನಿಕರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಬಜ್ಪೆ ಪೊಲೀಸರು, ನದಿಗೆ ಇಳಿದು ರಾತ್ರಿ 10ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದು, ಅರುಣ್ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.

ಇಂದು ಬೆಳಗ್ಗೆ ಮತ್ತೆ ಸ್ಥಳೀಯರ ಸಹಾಯದೊಂದಿಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News