ನಮ್ಮ ನಡುವೆ ಅವರು ಸದಾ ಜೀವಂತವಾಗಿದ್ದಾರೆ...: ಅಶ್ವಿನಿ ಪುನೀತ್​ ರಾಜ್​ಕುಮಾರ್ ಭಾವುಕ ಪತ್ರ

Update: 2022-10-29 10:14 GMT

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು, ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ. 

ಈ ನಡುವೆ ಪತ್ರವೊಂದನ್ನು ಬರೆದಿರುವ ಪುನೀತ್​ ರಾಜ್​ಕುಮಾರ್ ಪತ್ನಿ ಅಶ್ವಿನಿ ಅವರು, ಅದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 

ಪತ್ರದಲ್ಲಿ ತಮ್ಮ ಬೆಂಬಲಕ್ಕೆ ನಿಂತ ಪುನೀತ್​ ರಾಜ್​ಕುಮಾರ್ ಅವರ ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 

'ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೆ, ನಮ್ಮ ಆಲೋಚನೆಗಳಲ್ಲಿ, ನಾವು ಮಾಡುವ ಸತ್ಕಾರ್ಯಗಳಲ್ಲಿ, ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು' ಎಂದು ಅಶ್ವಿನಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ: 'ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...': ಪುನೀತ್ ರಾಜ್ ಕುಮಾರ್ ಮಾಡಿದ್ದ ಟ್ವೀಟ್​ ವೈರಲ್

Similar News