ಕ್ರಿಶ್ಚಿಯನ್ ಸಮುದಾಯದ ಸರಕಾರಿ ಯೋಜನೆಗಳ ಮಾಹಿತಿ ಶಿಬಿರ

Update: 2022-10-29 13:27 GMT

ಉಡುಪಿ, ಅ.29: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕ್ರಿಶ್ಚಿಯನ್ ಸಮುದಾಯ ದವರಿಗೆ ಸರಕಾರದಿಂದ ಸಿಗುವ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಹಾಗೂ ಸಮಾಲೋಚನಾ ಸಭೆ  ಇಂದು ಉಡುಪಿ ಡಾನ್ ಬಾಸ್ಕೊ ಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಕ್ರಿಶ್ಚಿಯನ್ ಸಮುದಾಯ ದವರು ಸರಕಾರದಿಂದ ಸಿಗುವ ವಿವಿಧ ಯೋಜನೆಗಳ ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆನಡಿ ಶಾಂತ ಕುಮಾರ್, ಧರ್ಮಗುರುಗಳಾದ ಚಾರ್ಲ್ಸ್ ಮೆನೇಜಸ್, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ, ಪ್ರಧಾನ ಮಂತ್ರಿ 15 ಅಂಶಗಳ ಮತ್ತು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಸಂಸ್ಥೆಗಳ ಉಸ್ತುವಾರಿ ಸದಸ್ಯ ಅಲ್ವಿನ್ ಡಿಸೋಜ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಭಾರ ಅಧಿಕಾರಿ ಸಚಿನ್ ಉಪಸ್ಥಿತರಿದ್ದರು.

Similar News