ಬೆಂಗಳೂರು: ರಸ್ತೆ ಗುಂಡಿಗೆ ಬೈಕ್ ಸವಾರ ಯುವಕ ಬಲಿ, ಇನ್ನೋರ್ವ ಗಂಭೀರ

Update: 2022-10-30 10:24 GMT

ಬೆಂಗಳೂರು, ಅ.30: ರಸ್ತೆ ಗುಂಡಿಯ ಕಾರಣ ಸಂಭವಿಸಿದ ಸರಣಿ ಅಪಘಾತ(Accident)ದಲ್ಲಿ ಓರ್ವ ಯುವಕ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಕಳೆದ ರಾತ್ರಿ ಸಂಭವಿಸಿದೆ.

ಅಟ್ಟೂರು ಬಡಾವಣೆಯ ರಸ್ತೆಯಲ್ಲಿ ಬೃಹತ್ ಗುಂಡಿ ಸೃಷ್ಟಿಯಾಗಿದ್ದು, ಕಳೆದ ರಾತ್ರಿ ಕಾರೊಂದು ಈ ಗುಂಡಿಗೆ ಬೀಳುವುದನ್ನು ತಪ್ಪಿಸುವ ಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಇದೇವೇಳೆ ಎದುರಿನಿಂದ ಬರುತ್ತಿದ್ದ ಬೈಕೊಂದು ಉರುಳಿಬಿದ್ದ ಈ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರರ ಪೈಕಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈ ಬಗ್ಗೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News