ನಂದಿನಿ ಹಾಲಿನ ದರ ಶೀಘ್ರದಲ್ಲೇ ಹೆಚ್ಚಳ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Update: 2022-10-31 12:10 GMT

ಬೆಳಗಾವಿ, ಅ. 31: ‘ನಂದಿನಿ ಹಾಲಿನ ದರ ಶೀಘ್ರದಲ್ಲೆ ಪರಿಷ್ಕರಣೆ ಮಾಡಲಿದ್ದು, ಪ್ರತಿ ಲೀಟರ್ ಹಾಲಿಗೆ 3 ರೂ.ಹೆಚ್ಚಳವಾಗಲಿದ್ದು, ಇದರಿಂದ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ನಂದಿನಿ ಹಾಲಿನ ದರ ಹೆಚ್ಚಳದ ಹಣ ಸಂಪೂರ್ಣ ರೈತರಿಗೆ ಸಂದಾಯವಾಗಲಿದೆ’ ಎಂದರು.

‘ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್‍ಗೆ ಹಾಲಿನ ದರ ಪರಿಷ್ಕರಿಸಲು ಪ್ರಸ್ತಾವನೆ ಸಲ್ಲಿಸಿವೆ. ಹೈನುಗಾರರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಅನಿವಾರ್ಯ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

Similar News