ಚಾಮರಾಜನಗರ: ರಥೋತ್ಸವ ವೇಳೆ ಮುರಿದು ಬಿದ್ದ ರಥ, ತಪ್ಪಿದ ಅನಾಹುತ

Update: 2022-11-01 08:28 GMT

ಚಾಮರಾಜನಗರ: ತಾಲೂಕಿನ ಚನ್ನಪ್ಪನಪುರ ಗ್ರಾಮದಲ್ಲಿರುವ ವೀರಭದ್ರೇಶ್ವರ ರಥೋತ್ಸವದ ವೇಳೆ ರಥ ಮುರಿದ ಘಟನೆ ನಡೆದಿದೆ. 

ಭಕ್ತರು ತೇರು ಎಳೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆನ್ನಲಾಗಿದ್ದು, ಚಕ್ರವು ಮುರಿದಿದಿದ್ದರಿಂದ ರಥ ಉರುಳಿ ಬಿದ್ದಿದೆ ಎನ್ನಲಾಗಿದೆ. 

ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮಗಳ ನೂರಾರು ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಘಟನೆಯಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಕೊವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ. ಇದೀಗ ಎರಡು ವರ್ಷಗಳ ಬಳಿಕ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಲಾಗಿದೆ. 

Similar News