VIDEO- ಇನ್ಸ್‌ಪೆಕ್ಟರ್ ನಂದೀಶ್​ ಸಾವು ಪ್ರಕರಣ: ಆರಗ ಜ್ಞಾನೇಂದ್ರ, ಬೈರತಿ ಬಸವರಾಜು ಸೇರಿ 6 ಜನರ ವಿರುದ್ಧ ದೂರು

Update: 2022-11-02 18:32 GMT

ಬೆಂಗಳೂರು: ಕರ್ತವ್ಯ ಲೋಪ ಆರೋಪದ ಅಡಿ ಅಮಾನತುಗೊಂಡಿದ್ದ ಕೆ.ಆರ್.ಪುರ ಇನ್‌ಸ್ಪೆಕ್ಟರ್‌ ಎಚ್.ಎಲ್.ನಂದೀಶ್ ಹೃದಯಾಘಾತದಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ. 

ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ನಗರ ಪೊಲೀಸ್ ಅಯುಕ್ತ ಪ್ರತಾಪ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ, ಬೈರತಿ ಬಸವರಾಜ ಸಹೋದರ ಗಣೇಶ್ ಮತ್ತು ಸಂಬಂಧಿ ಚಂದ್ರಪ್ಪ ವಿರುದ್ಧ ಸೆಕ್ಷನ್ 304 (ಎ) ಮತ್ತು 107 ಅಡಿಯಲ್ಲಿ ಎಫ್.ಐ.ಆರ್ ದಾಖಲಿಸುವಂತೆ ದೂರು ನೀಡಿದ್ದಾರೆ.

Full View

Similar News