×
Ad

ವೈದ್ಯಕೀಯ ಶಿಕ್ಷಣದೊಂದಿಗೆ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ : ಡಾ. ಹರ್ಷವರ್ಧನ್

ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ - ಮೆಡ್ ಪಾರ್ಲಿಮೆಂಟ್ ಆರೋಗ್ಯ ರಕ್ಷಣೆ ಒಡಂಬಡಿಕೆ

Update: 2022-11-03 23:01 IST

ಕೊಣಾಜೆ: ವೈದ್ಯಕೀಯ ಕ್ಷೇತ್ರ ಸೇರಿದಂತೆ ನರ್ಸಿಂಗ್, ಫಿಸಿಯೋಥೆರಪಿ, ಅಲೈಡ್ ಸೈನ್ಸ್  ಶಿಕ್ಷಣದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಆರೋಗ್ಯ ರಕ್ಷಣೆಗೆ ಬೇಕಾದ ಕೌಶಲ್ಯವೃದ್ಧಿ ಇಂದಿನ ಅಗತ್ಯಗಳಲ್ಲಿ ಒಂದಾಗಿದ್ದು, ಶಿಕ್ಷಣದೊಂದಿಗೆ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ, ಈ ಕ್ಷೇತ್ರದಲ್ಲಿ ಯಶಸ್ಸು ಸ್ಥಾಪಿಸಿಲು ಸಾಧ್ಯ ಎಂದು  ಮೆಡ್ ಅಚೀವರ್ಸ್ ಗ್ರೂಪ್ ಆಫ್ ಕಂಪೆನಿಯ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಡಾ. ಹರ್ಷವರ್ದನ್ ಅಭಿಪ್ರಾಯಪಟ್ಟರು.

ಅವರು ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ (ಕಿಮ್ಸ್) ಇದರೊಂದಿಗೆ ಮೆಡ್ ಅಚೀವರ್ಸ್‍ನ ಮೆಡ್ ಪಾರ್ಲಿಮೆಂಟ್ ಮತ್ತು ವಿವಿಯ ಆರೋಗ್ಯ ರಕ್ಷಣಾ ಸಂಸ್ಥೆಗಳೊಂದಿಗೆ  ಶೈಕ್ಷಣಿಕ ಒಡಂಬಡಿಕೆ ಮತ್ತು ಆರೋಗ್ಯ ರಕ್ಷಣೆಗೆ ಕುರಿತಂತೆ ವಿವಿಯ ವಿಷಯಗಳ ವಿಚಾರದಲ್ಲಿ ನಡೆದ ಶೈಕ್ಷಣಿಕ ಅಧಿವೇಶನವನ್ನು ಉದ್ಧೇಶಿಸಿ ಮಾತನಾಡಿದರು.

ಕೋವಿಡ್ ನಂತರ ಆರೋಗ್ಯ ರಕ್ಷಣೆಯ ವಿಚಾರದಲ್ಲಿ ಅನೇಕ ಬದಲಾವಣೆಗಳು ಆಗಿವೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಆರೋಗ್ಯ ಕಾರ್ಯಕರ್ತರರ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರ ಸಲಹೆ ಸಹಕಾರ ಅಗತ್ಯವಿದ್ದು, ವೈದ್ಯಕೀಯ ಶಿಕ್ಷಣ ಮತ್ತು ಇತರ ಆರೋಗ್ಯ ಸಂಬಂಧಿ ಕೋರ್ಸುಗಳಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಈ ಒಡಂಬಡಿಕೆಯಿಂದ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಧ್ಯಕ್ಷರಾದ ಯು. ಕಣಚೂರು ಮೋನು ಅಧ್ಯಕ್ಷತೆ ವಹಿಸಿದ್ದರು. ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಡೀನ್ ಡಾ. ಕರ್ನಲ್ ಕೆ.ಸಿ. ಕಿರಣ್ ದಿಕ್ಸೂಚಿ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ  ಮೆಡ್ ಅಚೀವರ್ಸ್‍ನ ಮೆಡ್ ಪಾರ್ಲಿಮೆಂಟ್‍ನ  ತಜ್ಞರಾದ ಮೈಕೆಲ್ ಕೋಸ್, ಪ್ರೊ.ಮಾರ್ಕ್‍ಪರಸೋನ್ಸ್, ಡಾ. ಡೆಮಿನ್ ಈಸ್ಟನ್, ಪ್ರೊ.ಆ್ಯಂಡ್ರ್ಯು ಬಿವಾರ್ಡ್, ಡಾ. ಹೆನ್ರಿ ದೆ ಅಯಿಝ್‍ಪುರೊ, ಮ್ಯಾಥ್ಯು ಆ್ಯಟ್‍ಕಿನ್ಸ್, ಡಾ. ಬ್ರೂಸ್‍ಇನ್‍ಗ್ರಾಂ ಓಅಮ್, ಮಾರ್ಕೂಸ್ ಬೆಸ್ಟ್, ಡಾ. ಜೋರ್ಜ್‍ಮುಕ್‍ನಿಕ್, ಡಾ.ಬಾಸ್ತಸ್ತ್ ದಹಾಲ್ ಮೌನ್, ಡಾ.ಪದ್ಮಾ ಗಡಿಯಾರ್, ನಿಕೋಲಾಸ್ ಹೊವಾರ್ಡ್, ಮುಕುಂದ್ ಕುಮಾರ್, ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಪಿಯ ಕರ್ನಾಟಕ ಚಾಪ್ಟರ್‍ನ ಅಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ, ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಹರೀಶ್ ಶೆಟ್ಟಿ, ಕಣಚೂರು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಸೊಹೈಲ್   ಉಪಸ್ಥಿತರಿದ್ದರು.

ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ನಿರ್ದೇಶಕ ಅಬ್ದುಲ್ ರಹ್ಮಾನ್ ಸ್ವಾಗತಿಸಿ ಪ್ರಸ್ತಾವನೆಗೈದರು. ಆಡಳಿತಾಧಿಕಾರಿ ಡಾ.‌ ರೋಹನ್ ಮೋನಿಸ್ ವಂದಿಸಿದರು. ಪ್ರತಿಕ್ಷಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Similar News