ರೇಣುಕಾಚಾರ್ಯ ಸಹೋದರ ಪುತ್ರನ ಸಾವು ಮೇಲ್ನೋಟಕ್ಕೆ ಕೊಲೆಯಂತಿದೆ: ಯಡಿಯೂರಪ್ಪ

"ಸಮಗ್ರ ತನಿಖೆಗೆ ಕ್ರಮ"

Update: 2022-11-04 07:01 GMT

ಶಿವಮೊಗ್ಗ, ನ.4: ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅವರ ಸಾವು ಮೇಲ್ನೋಟಕ್ಕೆ ಕೊಲೆಯಂತಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ಮಾಡಿಸುತ್ತೇವೆ. ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಾಣಿಸುತ್ತಿದೆ. ತನಿಖೆಯಿಂದ ಸತ್ಯ ಗೊತ್ತಾಗಲಿದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ, ಶೀಘ್ರ ತನಿಖೆ ನಡೆಸುವಂತೆ ಒತ್ತಾಯಿಸಲಿದ್ದೇನೆ ಎಂದು ತಿಳಿಸಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೆ ವೇಳೆ ಮಾತಾಡಿದ ಅವರು, ಚಂದ್ರಶೇಖರ್ ಸಕ್ರಿಯ ರಾಜಕಾರಣದಲ್ಲಿ ಇದ್ದರು. ಅವರ ಸಾವಿನಿಂದ ಬಿಜೆಪಿಗೆ ನಷ್ಟವಾಗಿದೆ. ಪ್ರಕರಣ ಸಂಬಂಧಿಸಿ ಸೂಕ್ತ ತನಿಖೆಯಾಗಬೇಕಿದೆ ಎಂದರು.

ಇದನ್ನೂ ಓದಿ: ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ತೆ

Similar News