ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

Update: 2022-11-06 15:00 GMT

ಶಂಕರನಾರಾಯಣ : ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಬೆಳ್ಬೆ ಗ್ರಾಮದ ಗೋಳಿಯಂಗಡಿ ಸುರಭಿ ಹೊಟೇಲ್ ಬಳಿ ನ.5ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಹಿಲಿಯಾಣ ಗ್ರಾಮದ ಕಾರೆಕೊಡ್ಲು ನಿವಾಸಿ ರಾಮ ನಾಯ್ಕ (70) ಎಂದು ಗುರುತಿಸಲಾಗಿದೆ. ಬೆಳ್ವೆ ಕಡೆಯಿಂದ ಗೋಳಿಯಂಗಡಿ ಪೇಟೆ ಕಡೆಗೆ ಹೋಗುತ್ತಿದ್ದ ಬೈಕ್ ಮಣ್ಣು ರಸ್ತೆಯಲ್ಲಿ ನಿಂತುಕೊಂಡಿದ್ದ ರಾಮ ನಾಯ್ಕ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News