ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಸಾವು ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು

Update: 2022-11-06 16:14 GMT

ಮೈಸೂರು(Mysuru): ಕಾರು ಢಿಕ್ಕಿಯಾಗಿ ಮೃತಪಟ್ಟ ನಿವೃತ್ತ ಐಬಿ (Intelligence Bureau) ಅಧಿಕಾರಿ, ಶಾರದದೇವಿನಗರದ ನಿವಾಸಿ ಆರ್.ಎನ್.ಕುಲಕರ್ಣಿ (RK Kulkarni) ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಅಂಶಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚಿಸಿದ್ದಾರೆ. ರವಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆಯಿಂದ ಮಾನಸ ಗಂಗೋತ್ರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಕರಣದ ಹಿನ್ನೆಲೆಯಲ್ಲಿ ಶನಿವಾರ ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಡೆಸಿದ್ದು, ಬೆಳಿಗ್ಗೆ ಮತ್ತು ಸಂಜೆ ಸಾರ್ವಜನಿಕರಿಗೆ ವಾಯುವಿಹಾರಕ್ಕೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ತಾಯಿ, ಸಹೋದರಿ ಸಹಿತ ಕುಟುಂಬದ ನಾಲ್ವರು ಸದಸ್ಯರನ್ನು ಹತ್ಯೆಗೈದ ಬಾಲಕನ ಬಂಧನ

Full View

Similar News