ದಾವಣಗೆರೆ: ಮಹಾನಗರ ಪಾಲಿಕೆ ವ್ಯವಸ್ಥಾಪಕ ವೆಂಕಟೇಶ್ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ಆರೋಪ

Update: 2022-11-07 04:11 GMT

ದಾವಣಗೆರೆ: ಮೂರು ಲಕ್ಷ ರೂ. ಲಂಚ ಪಡೆಯುವ ವೇಳೆ ಮಹಾನಗರ ಪಾಲಿಕೆ  ವ್ಯವಸ್ಥಾಪಕ ವೆಂಕಟೇಶ್ ಎಂಬಾತನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕೃಷ್ಣಪ್ಪ ಎಂಬವರಿಗೆ ಜಕಾತಿ ಟೆಂಡರ್ ಕೊಡಲು 7 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ವೆಂಕಟೇಶ. ಈಗಾಗಲೇ ಎರಡು ಲಕ್ಷ ರೂ. ಅಡ್ವಾನ್ಸ್ ಪಡೆದಿದ್ದ ಎಂದು ದೂರಲಾಗಿದೆ.

ಮಹಾನಗರ ಪಾಲಿಕೆ ಕಚೇರಿಯಲ್ಲಿ ಮೂರು ಲಕ್ಷ ರೂ. ಲಂಚ ಸ್ವೀಕರಿಸುವಾಗ ವೆಂಕಟೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ ಆಂಜನೇಯ ಹಾಗೂ ಇತರ ಅಧಿಕಾರಿಗಳು ದಾಳಿಯ ಸಂದರ್ಭ ಉಪಸ್ಥಿತರಿದ್ದರು.

Similar News