ಚಾಮರಾಜನಗರ: ಪೊಲೀಸ್ ಸಿಬ್ಬಂದಿ ವಾಹನ-ಈಚರ್ ನಡುವೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ

Update: 2022-11-07 03:28 GMT

ಚಾಮರಾಜನಗರ: ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿ ವಾಹನಕ್ಕೆ ಈಚರ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಗಂಭೀರ ಗಾಯಗೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಬಳಿ ತಡರಾತ್ರಿ ನಡೆದಿದೆ.

ಅಪಘಾತದಿಂದ ಇಬ್ಬರು ಎಎಸ್ಐಗಳು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಮಲ್ಲಿಕಾರ್ಜುನ, ತೆರಕಣಾಂಬಿ ಪೊಲೀಸ್ ಠಾಣೆಯ ಎಎಸ್‌ಐ ಮಹದೇವಸ್ವಾಮಿ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Similar News