ಅಕ್ರಮ ಗಣಿಗಾರಿಕೆ ಪ್ರಕರಣ: ಹೈಕೋರ್ಟ್ ತೀರ್ಪು ಪ್ರಶ್ನಿಸಿದ ಹೇಮಂತ್ ಸೊರೆನ್ ಅರ್ಜಿ ಅಂಗೀಕರಿಸಿದ ಸುಪ್ರೀಂಕೋರ್ಟ್
Update: 2022-11-07 06:41 GMT
ಹೊಸದಿಲ್ಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಅಂಗೀಕರಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸೊರೆನ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಹೈಕೋರ್ಟ್ ನಡೆಸಿತ್ತು.
2021 ರಲ್ಲಿ ಅಧಿಕಾರದಲ್ಲಿದ್ದಾಗ ಸ್ವತಃ ಗಣಿ ಗುತ್ತಿಗೆ ನೀಡಿದ್ದಕ್ಕಾಗಿ ಬಿಜೆಪಿಯ ದೂರಿನ ಮೇರೆಗೆ ಸೊರೆನ್ ಶಾಸಕರಾಗಿ ಅನರ್ಹತೆಯನ್ನು ಎದುರಿಸುತ್ತಿದ್ದಾರೆ.
ಸೊರೆನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ರಮೇಶ್ ಬೈಸ್ಗೆ ಚುನಾವಣಾ ಆಯೋಗವು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.