ಶಿವಮೊಗ್ಗ; ಪೊಲೀಸ್ ಸಿಬ್ಬಂದಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳ ಸೆರೆ

Update: 2022-11-08 18:07 GMT

ಶಿವಮೊಗ್ಗ, ನ.8: ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿ ಸಮವಸ್ತ್ರ ಹರಿದ ಆರೋಪಿಗಳನ್ನು ಬಂಧಿಸಿದ ಘಟನೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ನಡೆದಿರುವುದು ವರದಿಯಾಗಿದೆ.

ರಾಮಚಂದ್ರ ಮತ್ತು ಆತನ ಸಹೋದರ ಕೃಷ್ಣಮೂರ್ತಿ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. 

ಪ್ರಕರಣದ ವಿವರ: ಪ್ರಕರಣ ಒಂದರ ವಿಚಾರಣೆಗಾಗಿ ರಾಮಚಂದ್ರ ಮತ್ತು ಆತನ ಸಹೋದರ ಕೃಷ್ಣಮೂರ್ತಿಯನ್ನು ಪೊಲೀಸರು ನಗರ ಠಾಣೆಗೆ ಕರೆಸಿದ್ದರು. ವಿಚಾರಣೆ ವೇಳೆ ರಾಮಚಂದ್ರ ಮತ್ತು ಕೃಷ್ಣಮೂರ್ತಿ, ಪಿಎಸ್‌ಐ ನಾಗರಾಜ್, ಸಿಬ್ಬಂದಿ ವೆಂಕಟೇಶ್ ಮತ್ತು ದೇವರಾಜ್ ನಾಯ್ಕ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಪೊಲೀಸ್ ಸಿಬ್ಬಂದಿ ದೇವರಾಜ್ ನಾಯ್ಕ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Similar News