ಹೆಣ್ಣು ಮಕ್ಕಳು ಸ್ವಾಮಿಗಳ ಬಳಿ ಹೋಗದಂತಹ ಸ್ಥಿತಿ ನಿರ್ಮಾಣ: ಶಾಮನೂರು ಶಿವಶಂಕರಪ್ಪ

Update: 2022-11-09 05:42 GMT

ಚಿತ್ರದುರ್ಗ: 'ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ' ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ನಡೆದ 2022ರ ರಾಷ್ಟ್ರೀಯ ನಾಟಕೋತ್ಸವ  ಸಮಾರಂಭದಲ್ಲಿ ಮಾತನಾಡಿದ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, 'ಪೋಷಕರು  ಬಡವರಾಗಲಿ, ಶ್ರೀಮಂತರಾಗಲಿ ಯಾರೇ ಆಗಿದ್ದರೂ ತಮ್ಮ ಮಕ್ಕಳು ವಿದ್ಯಾವಂತರಾಗಬೇಕೆಂದೇ ಬಯಸುತ್ತಾರೆ. ಆದರೆ ಈಗ ಹೆಣ್ಣು ಮಕ್ಕಳು ಸ್ವಾಮೀಜಿ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿ ಬರಬಾರದು' ಎಂದು ಹೇಳಿದರು.

''ನಮ್ಮ ಹೆಣ್ಣು ಮಕ್ಕಳು ಕೂಡ ಎಚ್ಚರವಾಗಿ ಇರಬೇಕು ಎಂದ ಅವರು,  ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಮಾಡುತ್ತದೆ'' ಎಂದು ತಿಳಿಸಿದರು. 

ಇದನ್ನೂ ಓದಿ... ಮುರುಘಾ ಶ್ರೀಯಿಂದ ಕ್ಷಮಿಸಲಾರದ, ಅಕ್ಷಮ್ಯ ಅಪರಾಧ: ಮಾಜಿ ಸಿಎಂ ಯಡಿಯೂರಪ್ಪ

Similar News