ಚಿತ್ತಾಪುರ | ಟ್ಯಾಂಕರ್-ಲಾರಿ ನಡುವೆ ಅಪಘಾತ: ಟ್ಯಾಂಕರ್ ಚಾಲಕ ಸಾವು

Update: 2022-11-09 08:04 GMT

ವಾಡಿ: ಡಿಸೇಲ್ ಟ್ಯಾಂಕರ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ  ನಡೆದಿರುವುದಾಗಿ ವರದಿಯಾಗಿದೆ.

ಅಪಘಾತದಲ್ಲಿ ಇಂಡಿಯನ್ ಆಯಿಲ್ ಕಂಪನಿಯ ಡಿಸೇಲ್ ಟ್ಯಾಂಕರ್ ಚಾಲಕ ಚಂದ್ರಕಾಂತ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ನಜ್ಜುಗುಜ್ಜಾಗಿದ್ದು, ಡಿಸೇಲ್ ಟ್ಯಾಂಕರ್ ವಾಹನ ಹೆದ್ದಾರಿ ಪಕ್ಕದ ಹೊಲಕ್ಕೆ ಬಿದ್ದಿದೆ. ಸ್ಥಳಕ್ಕೆ ವಾಡಿ ಠಾಣೆ ಪಿಎಸ್ ಐ ಮಹಾಂತೇಶ ಜಿ.ಪಾಟೀಲ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Similar News