ಬೆಳಗಾವಿ: ಪೊಲೀಸರ​ ವಶದಲ್ಲಿದ್ದ ಆರೋಪಿ ಸಾವು

Update: 2022-11-12 07:12 GMT

ಬೆಳಗಾವಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಕರೆತರಲಾಗಿದ್ದ ಆರೋಪಿಯೊಬ್ಬ ಪೊಲೀಸರ ವಶದಲ್ಲಿದ್ದ ವೇಳೆಯೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. 

ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ್ (45) ಮೃತಪಟ್ಟಿರುವ ಆರೋಪಿ ಎಂದು ತಿಳಿದು ಬಂದಿದೆ.

ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಸನಗೌಡ ಈರನಗೌಡ ಪಾಟೀಲ್ ಅನ್ನು ಶುಕ್ರವಾರ ಬಂಧಿಸಿ ಠಾಣೆಗೆ ಕರೆತಂದಿದ್ದು, ಅನಾರೋಗ್ಯದಿಂದ ಆತ ಮೃತಪಟ್ಟಿರುವುದಾಗಿ ಬೆಳಗಾವಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ>>> ಮಡಿಕೇರಿ: ಯುವತಿ ಆತ್ಮಹತ್ಯೆ

ಸಿಐಡಿ ತನಿಖೆಗೆ ಶಿಫಾರಸು:

''ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಆತನನ್ನು ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸದ್ಯಕ್ಕೆ ಪ್ರಕರಣವನ್ನು ಸಿಐಡಿ ತನಿಖೆ ನಡೆಸುವಂತೆ ಶಿಫಾರಸು ಮಾಡಲಾಗಿದೆ''

-  ರವೀಂದ್ರ ಗಡಾದಿ, ಡಿಸಿಪಿ

Similar News