ಕೋಲಾರದಿಂದಲೇ ಸ್ಪರ್ಧಿಸುವಂತೆ ಹೆಚ್ಚಿನ ಒತ್ತಡ ಇದೆ: ಸಿದ್ದರಾಮಯ್ಯ

ವಿಶೇಷ ಬಸ್‌ನಲ್ಲಿ ಕೋಲಾರಕ್ಕೆ ಪ್ರಯಾಣ ಬೆಳೆಸಿದ ವಿಪಕ್ಷ ನಾಯಕ

Update: 2022-11-13 05:51 GMT

ಬೆಂಗಳೂರು:  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವಂತೆ ಹೆಚ್ಚಿನ ಒತ್ತಡ ಇದೆ. ಅಲ್ಲಿನ ಸ್ಥಳೀಯ ನಾಯಕರ ಜೊತೆ ಚರ್ಚಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾದಾಮಿ, ವರುಣಾ, ಚಾಮರಾಜಪೇಟೆ ಹೀಗೆ ಹಲವು ಕ್ಷೇವರುತ್ರಗಳಿಂದಲೂ ಆಹ್ವಾನ ಬಂದಿದೆ. ಆದರೆ ಕೋಲಾರದಲ್ಲಿ ಹೆಚ್ಚಿನ ಒತ್ತಡವಿದೆ ಎಂದರು.

ಚುನಾವಣಾ ಪ್ರಚಾರಕ್ಕಾಗಿ ಸಿದ್ಧಪಡಿಸಿರುವ ವಿಶೇಷ ಬಸ್‌ನಲ್ಲಿ  ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣ ಬೆಳೆಸಿದರು. 

Similar News