ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್​​ ಟಿಕೆಟ್​ಗೆ ಅರ್ಜಿ ಸಲ್ಲಿಸಿದ ಸಿನೆಮಾ ನಿರ್ಮಾಪಕ ಉಮಾಪತಿ ಗೌಡ

Update: 2022-11-14 07:33 GMT

ಬೆಂಗಳೂರು:  ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷದ ನಾಯಕರು ಸಜ್ಜಾಗುತ್ತಿದ್ದು, ಕಾಂಗ್ರಸ್ ನಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. 

ಬೊಮ್ಮನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರಸ್ ನ ಟಿಕೆಟ್​  ಆಕಾಂಕ್ಷಿಯಾಗಿರುವ ಕನ್ನಡದ ಸಿನೆಮಾ ನಿರ್ಮಾಪಕ ಡಿ. ಉಮಾಪತಿ ಗೌಡ ಅವರು 2 ಲಕ್ಷ ರೂ. ಡಿಡಿ ಮೂಲಕ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ  ಸತೀಶ್ ರೆಡ್ಡಿ ವಿರುದ್ಧ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. 

► ಕಾಂಗ್ರೆಸ್‌ ಟಿಕೆಟ್‌ ಅರ್ಜಿಗೆ 2 ಲಕ್ಷ ರೂ.: ಡಿಕೆಶಿ

 'ಕಾಂಗ್ರೆಸ್‌ ಟಿಕೆಟ್‌ ಅರ್ಜಿಗೆ 5 ಸಾವಿರ ರೂ. ಶುಲ್ಕ, ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ.ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. 

Similar News