ಕಲಬುರಗಿ ನಗರದಲ್ಲಿ ಮತ್ತೆ ಪ್ರತ್ಯಕ್ಷಗೊಂಡ 'PayCM' ಪೋಸ್ಟರ್

Update: 2022-11-14 09:30 GMT

ಕಲಬುರಗಿ (Kalaburagi): ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವ ಚಿತ್ರ ಇರುವ ‘ಪೇ ಸಿಎಂ’ ಕ್ಯೂಆರ್ ಕೋಡ್ ಪೋಸ್ಟರ್ ಅಂಟಿಸುವ ಅಭಿಯಾನವನ್ನು ಕಾಂಗ್ರೆಸ್ ಕಲಬುರಗಿ ನಗರದಲ್ಲಿ ಮತ್ತೆ ಆರಂಭಿಸಿದೆ.

ಚಿತ್ತಾಪುರ ಪಟ್ಟಣದಲ್ಲಿ ಶಾಸಕ 'ಪ್ರಿಯಾಂಕ್ ಖರ್ಗೆ ಅವರು ಕಾಣೆಯಾಗಿದ್ದಾರೆ' ಎಂದು ಇತ್ತೀಚೆಗೆ  ನಗರದ ಹಲವಡೆ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ 'ಪೇಸಿಎಂ' ಪೋಸ್ಟರ್‌ಗಳು ನಗರದ ಹಲವೆಡೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತ್ಯಕ್ಷಗೊಂಡಿದೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಈ ಬೆನ್ನಲ್ಲೇ ನಗರದ ಹಲವೆಡೆ 'ಪೇಸಿಎಂ' ಪೋಸ್ಟರ್ ಗಳು ಕಾಣಿಸಿಕೊಂಡಿದೆ. 

ಮುಖ್ಯಮಂತ್ರಿ ಭೇಟಿ:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ತಾಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದರು.

ಸಮಾರಂಭದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,  ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ  ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ  ಮೊದಲಾದವರು ಉಪಸ್ಥಿತರಿದ್ದರು.

Similar News