ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2022-11-14 16:23 GMT

ಬ್ರಹ್ಮಾವರ: ಬಾರಕೂರು ಹೊಸಾಳ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಬಾರಕೂರು ಹೊಸಾಳ ಗ್ರಾಮದ ವಿಜೇಂದ್ರ ಕುಮಾರ ನ.11ರಂದು ಮನೆಗೆ ಬೀಗ ಹಾಕಿ ಕುಟುಂಬದವ ರೊಂದಿಗೆ ತಿರುಪತಿ ಯಾತ್ರೆಗೆ ಹೋಗಿದ್ದರು. ನ.13ರಂದು ಮಧ್ಯಾಹ್ನ ವಾಪಾಸ್ಸು ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಎದುರಿನ ಪ್ರವೇಶ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು, ಕಾಪಾಟಿನಲ್ಲಿದ್ದ ಚಿನ್ನದ ರೋಪ್ ಸರ, ಚಿನ್ನದ ಸರ, 2 ಬಳೆಗಳು, ಚಿನ್ನದ ಉಂಗುರ, ಕಿವಿಯ ಬೆಂಡೊಲೆಗಳನ್ನು ಕಳವು ಮಾಡಿರು ವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯದ 148000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News