ಬೆಂಗಳೂರು; ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನ ಕೊಲೆ

Update: 2022-11-15 11:55 GMT

ಬೆಂಗಳೂರು, ನ.15: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊರ್ವನನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 

ತಮಿಳುನಾಡಿನ ವೆಲೂರು ಮೂಲದ ನಟರಾಜ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ನಟರಾಜ್ ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ. ಈ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

Similar News