ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಪಾಸ್‍ಪೋರ್ಟ್ ಜಪ್ತಿ

Update: 2022-11-15 13:58 GMT

ಬೆಂಗಳೂರು, ನ.15: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರ ಪಾಸ್‍ ಪೋರ್ಟ್ ಅನ್ನು ಬೆಂಗಳೂರು ಪಾಸ್‍ ಪೋರ್ಟ್ ಪ್ರಾದೇಶಿಕ ಕಚೇರಿ ಜಪ್ತಿ ಮಾಡಿದೆ ಎಂದು ವರದಿಯಾಗಿದೆ.

ಈ ಸಂಬಂಧ ಬೆಂಗಳೂರು ವಿಭಾಗೀಯ ಪಾಸ್‍ ಪೋರ್ಟ್ ಪ್ರಾದೇಶಿಕ ಕಚೇರಿ ಅಧಿಕಾರಿ ಕೃಷ್ಣ ಕುಮಾರ್ ಅವರು ಪತ್ರದ ಮೂಲಕ ಐಎಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಮಾಹಿತಿ ನೀಡಿದ್ದಾರೆ. 

ವಂಚನೆ, ಕಲಾಕೃತಿ ಕಳವು ಸೇರಿದಂತೆ ಇನ್ನಿತರೆ ಗಂಭೀರ ಆರೋಪಗಳನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪಾ ಮೌದ್ಗಿಲ್ ಅವರು ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಮಾಡಿದ್ದರು. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಯೂ ದಾಖಲಾಗಿದೆ.

ಇದನ್ನೂ ಓದಿ: ಅಧ್ಯಕ್ಷರ ತಪ್ಪು ಮಾಹಿತಿಯಿಂದ ಕರಕುಶಲ ಅಭಿವೃದ್ಧಿ ನಿಗಮಕ್ಕೆ ದಂಡ: ಐಪಿಎಸ್ ಅಧಿಕಾರಿ ಡಿ.ರೂಪಾ

Similar News