ಬ್ಯಾಂಕ್ ಉದ್ಯೋಗಿ ಮೃತ್ಯು ಪ್ರಕರಣ: ತನಿಖೆ ಮುಂದುವರಿಕೆ

Update: 2022-11-15 16:05 GMT

ಉಡುಪಿ : ಮನೆಯ ಮಹಡಿಯ ಕೊಠಡಿಯಲ್ಲಿ ಬೆಂಕಿಯಿಂದ ಸುಟ್ಟು ಮೃತಪಟ್ಟ ಕರ್ನಾಟಕ ಬ್ಯಾಂಕಿನ ಲೀಗಲ್ ಆಫೀಸರ್, ನಗರದ ವಾದಿರಾಜ ರಸ್ತೆಯ ನಿವಾಸಿ ರಾಜಗೋಪಾಲ್ ಸಾಮಗ (42) ಸಾವಿನ ಪ್ರಕರಣದ ತನಿಖೆ ಮುಂದುವರೆದಿದ್ದು, ಕಾರಣ ಇನ್ನೂ ನಿಗೂಢವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ ಮೃತದೇಹ ಹಾಗೂ ಕೊಠಡಿಯಲ್ಲಿನ ಕೆಲವು ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಣಿಪಾಲ ಆಸ್ಪತ್ರೆಯಲ್ಲಿ ನಡೆಸ ಲಾಗಿದ್ದು, ಸಾವಿನ ಕಾರಣಕ್ಕಾಗಿ ಪೊಲೀಸರು ಈ ವರದಿಗಳ ನಿರೀಕ್ಷೆಯಲ್ಲಿದ್ದಾರೆ.

ರಾಜಗೋಪಾಲ್ ಸಾಮಗ ಶಾರ್ಟ್‌ಸಕ್ಯೂಟ್‌ ನಿಂದ ಮೃತಪಟ್ಟಿರಬಹುದೆ ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದೆ ಎಂಬುದರ ಬಗ್ಗೆ ತನಿಖೆ ನಡೆಸ ಲಾಗುತ್ತಿದೆ. ಇವರು ನ.14ರಂದು ಸಂಜೆ ವೇಳೆ ಮನೆಯ ಕೊಠಡಿಯಲ್ಲಿ ಬೆಂಕಿ ಯಿಂದ ಸುಟ್ಟ ಸ್ಥಿತಿಯಲ್ಲಿ ಮೃತಪಟ್ಟಿದ್ದರು.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News