ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೊಲೆ
Update: 2022-11-16 04:47 GMT
ಕಲಬುರಗಿ: ಇಲ್ಲಿನ ಶರಣ ಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಲೆ ಮಾಡಿರುವ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ನಗರದ ನಿವಾಸಿ ಮೊಹಮ್ಮದ್ ಮುದಸ್ಸಿರ್ (19) ಕೊಲೆಯಾದ ವಿದ್ಯಾರ್ಥಿ. ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಹತ್ತಿರ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದರು.
ಗಾಯಗೊಂಡ ಮುದಸ್ಸಿರ್ ನನ್ನು ಮಣೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ... ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ FIR ದಾಖಲು