ಸುಳ್ಯ: ಹೊಳೆ ನೀರಲ್ಲಿ ಮುಳುಗಿ ಇಬ್ಬರು ಸಾವು
Update: 2022-11-16 04:52 GMT
ಸುಳ್ಯ: ಸುಬ್ರಮಣ್ಯ ಯೇನೆಕಲ್ಲಿನ ಮುಖ್ಯ ರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಕಳೆದುಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಮೃತರನ್ನು ಧರ್ಮಪಾಲ ಪರಮಲೆ (46) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49) ಎಂದು ಗುರುತಿಸಲಾಗಿದೆ.
ಧರ್ಮಪಾಲ ಅವರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದ್ದು, ಇನ್ನಷ್ಟೇ ಶವ ಪರೀಕ್ಷೆ ನಡೆಯಬೇಕಾಗಿದೆ ಎಂದು ತಿಳಿದುಬಂದಿದೆ.