ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2022-11-17 11:36 GMT

ಬೆಂಗಳೂರು, ನ.17: ರಾಜ್ಯ ಸರಕಾರವು ತಲಾ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೊಳಿಸಿ ಗುರವಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಉತ್ತರ ಸಂಚಾರ ವಿಭಾಗದ ಡಿಸಿಪಿ ಎಸ್.ಸವಿತಾ ಅವರನ್ನು ಸಿಐಡಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಕೆ.ಅರುಣ್ ಅವರನ್ನು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕಲಬುರಗಿ ಜಿಲ್ಲೆಯ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲರಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಎಸ್.ಕೆ.ಸೌಮ್ಯಾಲತಾ ಅವರನ್ನು ರೈಲ್ವೆ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಕೋಲಾರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಚಿನ್ ಘೋರ್ಪಡೆ ಅವರನ್ನು ಬೆಂಗಳೂರು ನಗರ ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Similar News