ಶಾಸಕ ತನ್ವೀರ್ ಸೇಠ್ ಗೆ ಕೊಲೆ ಬೆದರಿಕೆ: ದೂರು

Update: 2022-11-17 15:53 GMT

ಮೈಸೂರು,ನ.17: ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‍ ಅವರಿಗೆ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಗುರುವಾರ ಮೈಸೂರು ದಕ್ಷಿಣ ವಲಯ ಐಜಿಪಿಗೆ ದೂರು ಸಲ್ಲಿಕೆ ಮಾಡಿದ್ದಾರೆ.  

ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ ಬಜರಂಗದಳ ಕಾರ್ಯಕರ್ತ ರಘು ಎಂಬಾತ 'ಟಿಪ್ಪು ಸುಲ್ತಾನರ ಒಂದಡಿಯ ಪ್ರತಿಮೆಯನ್ನೂ ನಿರ್ಮಿಸಲು ನಾವು ಬಿಡುವುದಿಲ್ಲ. ಶಾಸಕ ತನ್ವೀರ್ ಸೇಠ್ 100 ಅಡಿ ಪ್ರತಿಮೆ ನಿರ್ಮಿಸಲು ಮುಂದಾದರೆ ಅಂತಿಮ ಯಾತ್ರೆಗೆ ಸಿದ್ಧರಾಗಿ' ಎಂದು ಹೇಳಿಕೆ ನೀಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿದೆ.

ಈ ಸಂಬಂಧ ಗುರುವಾರ  ಎನ್‍ಆರ್ ಕ್ಷೇತ್ರದ ಸುಮಾರು 15ಕ್ಕೂ ಹೆಚ್ಚು ಕಾಂಗ್ರೆಸ್‍  ಮುಖಂಡರು, ಮೈಸೂರು ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ಕೊಲೆ ಬೆದರಿಕೆ ಹಾಕಿರು ವರಘು ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ವರ್ಷದ ಹಿಂದೆ ದುಷ್ಕರ್ಮಿಗಳ ಚಾಕು ಇರಿತಕ್ಕೆ ಒಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಸೇಠ್‍ ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಬೇಕು'  ಎಂದು ಆಗ್ರಹಿಸಿದ್ದಾರೆ. 

Similar News