ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2022-11-18 10:49 GMT

ಉಡುಪಿ, ನ.18: ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನ ಭವಾನಿ ಮಂಟಪದ ಡಾ.ಮುರಾರಿ ಬಲ್ಲಾಳ್ ವೇದಿಕೆಯಲ್ಲಿ ನ.25ರಂದು ನಡೆಯಲಿರುವ ಉಡುಪಿ ತಾಲೂಕು 13ನೇ ಕನ್ನಡ ಸಾಹಿತ್ಯ  ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪರೀಕ್ಷಾರ್ಥಿ ಭಾರತೀಯ ಆಡಳಿತ ಸೇವಾಧಿಕಾರಿ ಯತೀಶ್ ಆರ್., ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಅಧ್ಯಕ್ಷ  ರವಿರಾಜ್ ಎಚ್.ಪಿ., ಕಾರ್ಯದರ್ಶಿ ಜನಾರ್ದನ್ ಕೊಡವೂರು ಉಪಸ್ಥಿತರಿದ್ದರು.

ಹಿರಿಯ ಸಾಹಿತಿ ಟಿ.ತಿರುಮಲೇಶ್ವರ ಭಟ್ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಸಾಹಿತಿ ವೀಣಾ ಬನ್ನಂಜೆ ಉದ್ಘಾಟಿಸಲಿರುವರು.

Similar News