ರೈಲು ಢಿಕ್ಕಿ ಹೊಡೆದು ಮೃತ್ಯು

Update: 2022-11-18 11:56 GMT

ಬೈಂದೂರು : ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.17ರಂದು ರಾತ್ರಿ ವೇಳೆ ಬಿಜೂರು ಗ್ರಾಮದ ಮೂರ್ಗೋಳಿ ಹಕ್ಲು ಎಂಬಲ್ಲಿ ನಡೆದಿದೆ.

ಮೃತರನ್ನು ತಗ್ಗರ್ಸೆ ಗ್ರಾಮದ ಉದ್ದಾಬೆಟ್ಟು ನಿವಾಸಿ ನಾಗ ಮೊಗವೀರ (71) ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದು, ದಾರಿ ಮಧ್ಯೆ ಇರುವ ರೈಲ್ವೆ ಹಳಿ ದಾಟುತ್ತಿರುವಾಗ ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಸ್ಥಳದಲ್ಲಿಯೇ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Similar News