ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ತಂಡದಿಂದ ಹಲ್ಲೆ: ಪ್ರಕರಣ ದಾಖಲು
ಉಳ್ಳಾಲ: ಮಂಗಳೂರಿನಿಂದ ಔಷಧಿ ಖರೀದಿ ಮಾಡಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಮೂವರು ಅಪರಿಚಿತರು ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಅಪಹರಿಸಿಕೊಂಡು ಹೋದ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ಉಚ್ಚಿಲ ಬಳಿ ಗುರುವಾರ ತಡರಾತ್ರಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ತಲಪಾಡಿ ನಾರ್ಲಪದವು ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ.
ಹರ್ಷಿತ್ ಗುರುವಾರ ತಡರಾತ್ರಿ ಔಷಧಿ ಖರೀದಿಗೆಂದು ಮಂಗಳೂರಿಗೆ ತೆರಳಿದ್ದರು. ತಡರಾತ್ರಿ ಔಷಧಿ ಖರೀದಿ ಮಾಡಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಉಚ್ಚಿಲದಲ್ಲಿ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈಯನ್ನು ವಾಹನ ಅಡ್ಡಗಟ್ಟಿ ವಾಹನ ನಿಲ್ಲಿಸಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇದದರಿಂದ ಗಂಭೀರ ಗಾಯಗೊಂಡ ಹರ್ಷಿತ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.