ಮಂಗಳೂರು | ಮತದಾರರ ಪಟ್ಟಿ ಪರಿಷ್ಕರಣೆ ಪ್ರಕರಣದ ದೂರಿನ ಬಗ್ಗೆ ತ್ವರಿತ ವಿಚಾರಣೆ: ಸಿಎಂ ಬೊಮ್ಮಾಯಿ

Update: 2022-11-19 05:53 GMT

ಮಂಗಳೂರು, ನ.19: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಎರಡು ಲಕ್ಷ ಕೋಟಿ ಹೂಡಿಕೆ ಮಾಡಲು  ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯ ಮಂತ್ರಿ ಎಸ್. ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಇದರಿಂದ ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾಧನೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ ಬಂದ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಅಶ್ವತ್ಥನಾರಾಯಣ, ಶಾಸಕ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್.ಡಾ.ಭರತ್ ಶೆಟ್ಟಿ ,ಮನಪಾ ಮೇಯರ್ ಜಯಾನಂದ ಅಂಚನ್, ಮೊದಲಾದವರು ಉಪಸ್ಥಿತರಿದ್ದರು.

Similar News