ಮತದಾರರ ಪಟ್ಟಿ ಪರಷ್ಕರಣೆ ಅಕ್ರಮ ಆರೋಪ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Update: 2022-11-19 10:00 GMT

ಬೆಂಗಳೂರು: ಮತದಾರರ ಮಾಹಿತಿ ಕಳವು, ಪಟ್ಟಿಯಿಂದ ನಿರ್ದಿಷ್ಟ ಮತದಾರರ ಹೆಸರು ಕಿತ್ತು ಹಾಕಿರುವುದು ಸೇರಿದಂತೆ ಮತದಾರರ ಪಟ್ಟಿ ಅಕ್ರಮ ಕುರಿತು ಕೇಂದ್ರ ಚುನಾವಣೆ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕಾಂಗ್ರೆಸ್ ನಿಯೋಗವು ಶನಿವಾರ ದೂರು ಸಲ್ಲಿಸಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್,  ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಎಚ್ ಎಂ ರೇವಣ್ಣ, ಕೆ ಜೆ ಜಾರ್ಜ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಶಾಸಕ ರಿಜ್ವಾನ್ ಅರ್ಶದ್, ಸೌಮ್ಯ ರೆಡ್ಡಿ, ಎಂಎಲ್ಸಿ ಯು.ಬಿ. ವೆಂಕಟೇಶ್ ನಿಯೋಗದಲ್ಲಿದ್ದರು.

Similar News